ಅನಂತಕುಮಾರ್ ಹೆಗಡೆಗೆ ಸ್ವಾಗತ ಕೋರುವ ಬ್ಯಾನರ್ ಗೆ ಮಸಿ

Update: 2018-03-10 09:14 GMT

ಹುಬ್ಬಳ್ಳಿ, ಮಾ.10: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಗೆ ಸ್ವಾಗತ ಕೋರುವ ಬ್ಯಾನರ್ ಗೆ ಮಸಿ ಎರಚಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿರುವುದು ವರದಿಯಾಗಿದೆ.

ದೈವಜ್ಞ ಬ್ರಾಹ್ಮಣ ಸಮಾಜ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಸುವರ್ಣಕಾರರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.‌ ಇದಕ್ಕೆ ಸ್ವಾಗತ ಕೋರುವ ಫ್ಲೆಕ್ಸ್ ಗಳನ್ನು ವಿದ್ಯಾನಗರದ ದೈವಜ್ಞ ಕಲ್ಯಾಣ ಮಂಟಪದ ಎದುರು ಹಾಕಲಾಗಿತ್ತು. ಆದರೆ ಅನಂತಕುಮಾರ್ ಹೆಗಡೆಯವರ ಬರುವಿಕೆಯನ್ನು ಖಂಡಿಸಿ ದಲಿತ ಪರ ಸಂಘಟನೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ನಡೆಸಲು ಮುಂದಾಗಿದ್ದರು ಎಂದು ಹೇಳಲಾಗಿದೆ.

ಆದರೆ ಪ್ರತಿಭಟನಾನಿರತರನ್ನು ಮುನ್ನೆಚ್ವರಿಕಾ ಕ್ರಮವಾಗಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಕಿಡಿಗೇಡಿಗಳು ಬೈಕಿನಲ್ಲಿ ಬಂದು  ಅನಂತಕುಮಾರ್ ಹೆಗಡೆಗೆ ಸ್ವಾಗತ ಕೋರುವ ಫ್ಲೆಕ್ಸ್ ಗೆ ಕಪ್ಪು ಮಸಿ ಎರಚಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News