ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ
ಕೊಳ್ಳೇಗಾಲ,ಮಾ.12: ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು.
ಪಟ್ಟಣ ಪ್ರವಾಸಿಮಂದರಿಕ್ಕೆ ಸೋಮವಾರ ಆಗಮಿಸಿದ್ದ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷ ಸೇರುವ ದಿನಾಂಕವನ್ನು ನಿಗದಿ ಪಡಿಸಿಕೊಂಡು ನಂತರ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಮಾಧ್ಯಮದ ಮುಖಾಂತರ ತಿಳಿಸುವುದಾಗಿ ಹೇಳಿದರು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಪ್ರತಿ ಪಂಚಾಯತ್ ಗೆ ಭೇಟಿ ನೀಡುವ ಮುಖಾಂತರ ನನ್ನ ಪರವಾಗಿ ಇರುವ ಜನರ ವಿಶ್ವಾಸದ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದ ವರಿಷ್ಟರಿಗೆ ಬಿಟ್ಟಿದ್ದು ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ನಂತರ ಆಗಮಿಸಿದ್ದ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿದರು.
ಈ ಸಂಧರ್ಭದಲ್ಲಿ ಕಂದಹಳ್ಳಿ ನಂಜುಂಡಸ್ವಾಮಿ, ಅಶೋಕ, ಸತೀಶ್, ಲಂಚಮುಕ್ತವೇದಿಕೆಯ ಜಿಲ್ಲಾಧ್ಯಕ್ಷ ಮಾಂಬಳ್ಳಿ ಮೋಹನ್ಕುಮಾರ್, ಮುಸ್ತಾಕ್, ಮುಖಂಡರುಗಳಾದ ಚಿನ್ನಸ್ವಾಮಿಮಾಳಿಗೆ, ಕೃಷ್ಣರಾಜು, ಜಗದೀಶ್, ಪುನೀತ್, ಸ್ವಾಮಿನಂಜಪ್ಪ, ಶಿವಕುಮಾರ್, ಪರಮೇಶ್, ವರದರಾಜು, ಕುಂತೂರು ಗ್ರಾ.ಪಂ ಉಪಾಧ್ಯಕ್ಷ ಕುಮಾರಸ್ವಾಮಿ, ನಾಗೇಂದ್ರ, ಷಣ್ಮುಗ ಹಾಗೂ ಇನ್ನಿತರರು ಹಾಜರಿದ್ದರು.