ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಹೊಟ್ಟೆಯಲ್ಲೇ ಶಿಶು ಮೃತ್ಯು; ಆರೋಪ

Update: 2018-03-12 17:43 GMT

ದಾವಣಗೆರೆ,ಮಾ.12: ವೈದ್ಯರ ನಿರ್ಲಕ್ಷ್ಯದಿಂದಾಗಿ ಹೊಟ್ಟೆಯಲ್ಲೇ ಶಿಶು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾಗಿದೆ.

ಚನ್ನಗಿರಿ ತಾಲೂಕಿನ ತ್ಯಾವಣಿಗೆ ಗ್ರಾಮದ ಮಹಿಳೆ ರೇಣುಕಮ್ಮ (22) ಮಗು ಕಳೆದುಕೊಂಡ ತಾಯಿ.

ಹೆರಿಗೆಗೆಂದು ರೇಣುಕಾ ಅವರನ್ನು ಶನಿವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಹೆರಿಗೆ ನೋವಿನಿಂದ ಆಕೆ ಬಳಲುತ್ತಿದ್ದರೂ ವೈದ್ಯರು ಗಮನ ಹರಿಸಿಲ್ಲ. ಇದರಿಂದ ಬೇಸತ್ತ ರೇಣುಕಾ ಸಂಬಂಧಿಕರು ಕೂಡಲೇ ಸಿಸೇರಿಯನ್ ಮೂಲಕ ಮಗು ಹೊರತೆಗೆಯಲು ಒತ್ತಾಯಿಸಿದ್ದಾರೆ. ಆಗ ವೈದ್ಯರು ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ. ಆದರೆ ಅಷ್ಟರೊಳಗೆ ಮಗು ಹೊಟ್ಟೆಯಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.

ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ರೇಣುಕಾ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಜಿಲ್ಲಾಸ್ಪತ್ರೆ ಅಧೀಕ್ಷಕರಿಗೆ ವೈದ್ಯರ ನಿರ್ಲಕ್ಷ್ಯದ ವಿರುದ್ದ ದೂರು ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News