ಶಿವಮೊಗ್ಗ: ವಾಣಿಜ್ಯ ಉದ್ದೇಶಕ್ಕಾಗಿ ಸಬ್ಸಿಡಿ ಸಿಲಿಂಡರ್ ಬಳಕೆ; ಕೇಸ್ ದಾಖಲು

Update: 2018-03-14 15:12 GMT

ಶಿವಮೊಗ್ಗ, ಮಾ. 14: ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್ ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದ ಮನೆಯೊಂದರ ಮೇಲೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಂಗಳವಾರ ಶಿವಮೊಗ್ಗ ನಗರದ ಮೆಹಂದಿ ನಗರದಲ್ಲಿ ನಡೆದಿದೆ. 

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 5 ಸಬ್ಸಿಡಿ ಸಿಲಿಂಡರ್, ಎಲೆಕ್ಟ್ರಾನಿಕ್ ತೂಕದ ಯಂತ್ರ, ಮೋಟಾರ್, ಸಿಲಿಂಡರ್ ರಿಫೀಲ್ಲಿಂಗ್‍ಗೆ ಬಳಸುತ್ತಿದ್ದ ಸಲಕರಣೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಕಳೆದ ಹಲವು ದಿನಗಳಿಂದ ಸಬ್ಸಿಡಿ ಸಿಲಿಂಡರ್ ಗಳನ್ನು ವಾಣಿಜ್ಯ ಉದ್ದೇಶಕ್ಕೆ ರಿಫೀಲ್ಲಿಂಗ್ ಮಾಡಲಾಗುತ್ತಿತ್ತು. ಆರೋಪಿಗಳ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆಯಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದಾರೆ. ದಾಳಿಯಲ್ಲಿ ಆಹಾರ ನಿರೀಕ್ಷಕರಾದ ಎ.ಕೆ.ಮಲ್ಲಪ್ಪ, ಹೆಚ್.ಸಿ.ಮಂಜುನಾಥ್ ಮತ್ತವರ ಸಿಬ್ಬಂದಿಗಳು ಭಾಗಿಯಾಗಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News