ಉತ್ತರ ಪ್ರದೇಶ ಉಪಚುನಾವಣೆ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅಮಿತ್ ಶಾ

Update: 2018-03-18 09:33 GMT

ಹೊಸದಿಲ್ಲಿ, ಮಾ.18: ಉತ್ತರ ಪ್ರದೇಶ ಉಪಚುನಾವಣೆಯ ಫಲಿತಾಂಶವು ರಾಜ್ಯದಲ್ಲಿ ಪಕ್ಷದ ಕಾರ್ಯನಿರ್ವಹಣೆಯ ಬಗೆಗಿನ ಜನಾಭಿಪ್ರಾಯವಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಗೋರಖ್ ಪುರ ಹಾಗು ಫುಲ್ಪುರ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಶಾ, ಬಿಜೆಪಿ ಆಡಳಿತದಲ್ಲಿ ರಾಜ್ಯಗಳಲ್ಲಿ ಉತ್ತರ ಪ್ರದೇಶ ಉತ್ತಮ ಆಡಳಿತದ ರಾಜ್ಯಗಳಲ್ಲೊಂದು ಎಂದವರು ಹೇಳಿದರು,

“ಪಕ್ಷವು ಈ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿದೆ ಹಾಗು ಫಲಿತಾಂಶದ ಬಗ್ಗೆ ವಿಶ್ಲೇಷಣೆ ನಡೆಸಲಿದೆ” ಎಂದವರು ಹೇಳಿದರು.

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಹಲವು ಕಾರಣಗಳಿವೆ. ಶೇಕಡವಾರು ಮತದಾನ ಕಡಿಮೆಯಿತ್ತು ಹಾಗು ಇದೇ ಸಮಯ ಎಸ್ಪಿ ಮತ್ತು ಬಿಎಸ್ಪಿ ಜೊತೆಯಾಯಿತು ಎಂದು ಶಾ ಇದೇ ಸಂದರ್ಭ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News