ದಾವಣಗೆರೆ ನೂತನ ಎಸ್ಪಿಯಾಗಿ ಅರ್. ಚೇತನ್ ಅಧಿಕಾರ ಸ್ವೀಕಾರ

Update: 2018-03-19 05:50 GMT

ದಾವಣಗೆರೆ,ಮಾ.19: ದಾವಣಗೆರೆ ನೂತನ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಯಾಗಿ ಅರ್. ಚೇತನ್ ಅವರು ಅಧಿಕಾರ ವಹಿಸಿಕೊಂಡರು.

ಈ ವೇಳೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ 21ನೆ ಎಸ್ಪಿಯಾಗಿ ಅಧಿಕಾರಿ ಸ್ವೀಕರಿಸಿದ್ದೇನೆ. ಈ ಹಿಂದೆ  ಬಳ್ಳಾರಿ. ಚಿಕ್ಕಮಗಳೂರು ಎಸ್ಪಿಯಾಗಿ  ಸೇವೆ ಸಲ್ಲಿಸಿದ್ದೇನೆ. ಶೋಷಿತರು, ನೊಂದವರ ಮಹಿಳೆಯರು ಪರವಾಗಿ ನ್ಯಾಯ ದೊರಕಿಸುವ ಕೆಲಸ ಮಾಡುತ್ತೆನೆ. ಚುನಾವಣೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಥಮ ಅದ್ಯತೆ ನೀಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News