ಶಾಸಕ ಸಿ.ಟಿ.ರವಿ ಮನೆಯೆದುರು ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Update: 2018-03-20 05:16 GMT

ಚಿಕ್ಕಮಗಳೂರು, ಮಾ.20: ಶಾಸಕ ಸಿ.ಟಿ.ರವಿ ಮನೆಯಿರುವ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಜೆಡಿಎಸ್ ವಿಕಾಸ ಪರ್ವ ಕಾರ್ಯಕ್ರಮದ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತು ಹಾಕಿರುವ ಕೃತ್ಯವನ್ನು ಖಂಡಿಸಿ ಶಾಸಕರ ನಿವಾಸದೆದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜೆಡಿಎಸ್ ವಿಕಾಸ ಪರ್ವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಪ್ರಚಾರಾರ್ಥ ನಗರಸಭೆಯ ಅನುಮತಿ ಪಡೆದು ನಗರದೆಲ್ಲೆಡೆ ಬ್ಯಾನರ್, ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಅದೇರೀತಿ ಶಾಸಕ ಸಿ.ಟಿ.ರವಿ ಮನೆಯಿರುವ ಬಸವನಹಳ್ಳಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾನರ್, ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಪೈಕಿ 10ಕ್ಕೂ ಅಧಿಕ ಬ್ಯಾನರ್, ಫ್ಲೆಕ್ಸ್‌ಗಳಿಗೆ ಕಿಡಿಗೇಡಿಗಳು ಹಾನಿ ಎಸಗಿದ್ದಾರೆ. ಇದು ಬಿಜೆಪಿಗರ ಕೃತ್ಯ ಎಂದು ಆರೋಪಿಸಿರುವ ಜೆಡಿಎಸ್, ಇದರ ವಿರುದ್ಧ ಶಾಸಕ ಸಿ.ಟಿ.ರವಿ ಅವರ ಮನೆಯೆದುರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಬಸವನಹಳ್ಳಿ, ನರ ಪೊಲೀಸ್ ಯ ಪೊಲೀಸರು ಭೇಟಿ ಪರಿಶೀಲನೆ ನೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News