ಕೋಲಾರ: ಶಾಲಾ ಮಕ್ಕಳ ಮೇಲೆ ಹರಿದ ಕಾರು; ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತ್ಯು
Update: 2018-03-22 17:00 GMT
ಕೋಲಾರ, ಮಾ.22: ಬೈಕ್ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ವಡಗೂರು ಗೇಟ್ ಬಳಿ ನಡೆದಿದೆ.
ಕೆಂಬೋಡಿ ಹಿರಿಯ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಾದ ನಾರಾಯಣಸ್ವಾಮಿ(13), ಸುದರ್ಶನ್ (14) ಹಾಗೂ ಬೈಕ್ ಸವಾರ ವೆಂಕಟಪ್ಪ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ.