ದೇವೇಗೌಡರ ಕುಟುಂಬ ಒಡೆದು ನಮಗೇನು ಲಾಭ: ಎನ್.ಚಲುವರಾಯಸ್ವಾಮಿ

Update: 2018-03-26 17:21 GMT

ಮಂಡ್ಯ, ಮಾ.26: ದೇವೇಗೌಡರ ಕುಟುಂಬದ ವೈಯಕ್ತಿಕ ವಿಚಾರ ನಾವು ಮಾತನಾಡುವುದಿಲ್ಲ. ಅವರ ಕುಟುಂಬ ಒಡೆದು ನಮಗೇನು ಲಾಭವಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಸೋಮವಾರ ಕುಟುಂಬ ಸಮೇತ ನಗರದ ಲಕ್ಷ್ಮಿಜನಾರ್ಧನ ದೇವಾಲಯದಲ್ಲಿ ವೈರಮುಡಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ವಿಚಾರ ಮಾತನಾಡುವುದು ಸರಿಯಯಲ್ಲ ಎಂದರು.

ಆನರು ನಮ್ಮ ನಡೆನುಡಿಗಳನ್ನುಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ವೈಯಕ್ತಿಕವಾಗಿ ನಾವು ಯಾವತ್ತೂ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಅವಶ್ಯವಿದ್ದಾಗ ರಾಜಕೀಯವಾಗಿ ಮಾತ್ರ ಮಾತನಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ರಾಹುಲ್ ಎಐಸಿಸಿ ಅಧ್ಯಕ್ಷರಾದ ಮೇಲೆ ದೇಶದಲ್ಲಿ ಹೊಸ ಸಂಚಲನ ಮೂಡಿದೆ. ರಾಜ್ಯ ಪ್ರವಾಸಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸರಕಾರದ ಅಭಿವೃದ್ಧಿ ಕೆಲಸಗಳಿಂದಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜ್ವಲ್ ರೇಣವಣ್ಣ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತ ಹೇಳಿಕೆಗೆ ಝಮೀರ್ ಅಹಮದ್ ಈಗಾಗಲೇ ಸ್ಪಷ್ಟನೆ ನೀಡಿದ್ದು, ಇದೀಗ ಕಾಂಗ್ರೆಸ್ ಸೇರಿದ್ದು, ಇತರ ವಿಷಯಗಳನ್ನು ಮತ್ತೊಂದು ದಿನ ಹಂಚಿಕೊಳ್ಳುತ್ತೇನೆಂದು ಉತ್ತರಿಸಿದರು.

ಪತ್ನಿ ಧನಲಕ್ಷ್ಮೀ, ಪುತ್ರ ಸಚಿನ್, ನಗರಸಭೆ ಸದಸ್ಯ ಸೋಮಶೇಖರ್ ಕೆರಗೋಡು ಮತ್ತು  ಬೆಂಬಲಿಗರು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News