ಮೈಸೂರು: ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ಹತ್ಯೆ

Update: 2018-03-27 14:57 GMT

ಮೈಸೂರು,ಮಾ.27: ಸೆಕ್ಯೂರಿಟಿ ಗಾರ್ಡ್ ಓರ್ವರ ತಲೆಯ ಮೇಲೆ ಯಾರೋ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆಗೈದ ಘಟನೆ ರೈಲ್ವೆ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ಹೂಟಗಳ್ಳಿ ನಿವಾಸಿ ರಾಜ ಶೆಟ್ಟಿ(53)ಎಂದು ಗುರುತಿಸಲಾಗಿದ್ದು, ಇವರು ರೈಲ್ವೆ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಕ್ಯೂರಿಟಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಇವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ವಿ.ವಿ.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News