ನಂಜನಗೂಡಿನಿಂದ ನೀವು ಸ್ಪರ್ಧಿಸದಿದ್ದರೆ ಕಾಂಗ್ರೆಸ್ ಅನ್ನು ಸೋಲಿಸುತ್ತೇವೆ: ಸಚಿವ ಮಹದೇವಪ್ಪಗೆ ಬೆಂಬಲಿಗರ ಒತ್ತಾಯ

Update: 2018-04-06 14:33 GMT

ಮೈಸೂರು,ಎ.6: ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಾವೆಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗುತ್ತದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಂಬಲಿಗರು ಮತ್ತು ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ವಿಜಯನಗರದಲ್ಲಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಮನೆಗೆ ಜಮಾಯಿಸಿದ ಅಭಿಮಾನಿಗಳು ಕಾಂಗ್ರೆಸ್ ಪಕ್ಷದಿಂದ ನೀವೇ ಅಭ್ಯರ್ಥಿಯಾಗಬೇಕು. ಇಲ್ಲದಿದ್ದರೆ ನಂಜನಗೂಡಿನ ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳಲೆ ಕೇಶವಮೂರ್ತಿಗೆ ನಂಜನಗೂಡು ಅಭಿವೃದ್ಧಿ ಮಾಡೋದು ಗೊತ್ತಿಲ್ಲ. ಜೊತೆಗೆ ಅವರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯವೇ ಇಲ್ಲ. ಹೀಗಾಗಿ ಸಿಎಂ ಮನವೊಲಿಸಿ ಹೈಕಮಾಂಡ್ ನಿಂದ ಟಿಕೇಟ್ ಪಡೆಯಿರಿ. ನೀವು ಈ ಸಂದರ್ಭದಲ್ಲಿ ಮೌನವಾಗಿ ಕುಳಿತುಕೊಳ್ಳಬಾರದು ಎಂದು ಹೇಳಿದ್ದಾರೆ. 

ನಿವಾಸದ ಮುಂದೆ ಜಮಾಯಿಸಿದ ಜನರನ್ನು ಅವರ ಮನೆ ಪಕ್ಕದಲ್ಲಿರುವ ಕಲ್ಯಾಣ ಮಂಟಪಕ್ಕೆ ಕರೆದೊಯ್ದ ಮಹದೇವಪ್ಪ ಅವರು ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿದರು. ನಂತರ ಅವರ ಆಭಿಮಾನಿಗಳು, ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ತೆರಳಿ ಮಹದೇವಪ್ಪ ಅವರಿಗೆ ನಂಜನಗೂಡಿನಿಂದ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News