ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ: ಯಡಿಯೂರಪ್ಪ

Update: 2018-04-09 07:23 GMT

ಬೆಂಗಳೂರು, ಎ.9: ಸಂಸದೆ ಶೋಭಾ ಕರಂದ್ಲಾಜೆ  ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಸದ ಶ್ರೀರಾಮುಲು ಅವರಿಗೆ ವಿಶೇಷ ಕಾರಣಕ್ಕಾಗಿ ಟಿಕೆಟ್ ನೀಡಲಾಗಿದೆ ಎಂದರು.

ಮೊದಲಿಗೆ 72 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. 65 ರಿಂದ 70 ಕ್ಷೇತ್ರಗಳಿಗೆ ಎ.11ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News