ಮನೆಗೆ ನುಗ್ಗಿ ವಿದ್ಯಾರ್ಥಿಗಳ ಅಪಹರಣ ಪ್ರಕರಣ: ಇಬ್ಬರ ಸೆರೆ

Update: 2018-12-05 14:17 GMT

ಬೆಂಗಳೂರು, ಡಿ.5: ಸೈಕಲ್ ಕಳ್ಳತನ ಮಾಡಿದ ಆರೋಪದ ಮೇರೆಗೆ ಮನೆಯೊಂದಕ್ಕೆ ನುಗ್ಗಿ ಮಕ್ಕಳನ್ನು ಅಪಹರಣ ಮಾಡಿದ ಆರೋಪದಡಿ ಇಬ್ಬರನ್ನು ಇಲ್ಲಿನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಅಮತಹಳ್ಳಿಯ ಕೃಷ್ಣಮೂರ್ತಿ ಮತ್ತು ಅವಿನಾಶ್ ಬಂಧಿತರು ಎಂದು ಪೊಲೀಸರು ಗುರುತಿಸಿದ್ದಾರೆ.

9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ಸೈಕಲ್ ಕಳ್ಳತನ ಮಾಡಿದ್ದ ಎಂದು ಆರೋಪಿಸಿ ವಿದ್ಯಾರ್ಥಿಗಳಾದ ಭಾಸ್ಕರ್ ಮತ್ತು ವಿನೋದ್‌ನನ್ನು ಇನೋವಾ ಕಾರಿನಲ್ಲಿ ಆರೋಪಿಗಳು ಅಪಹರಣ ಮಾಡಿ ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಈ ಸಂಬಂಧ ವಿದ್ಯಾರ್ಥಿಗಳ ಪೋಷಕರು ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಕ್ಕಳನ್ನ ರಕ್ಷಿಸಿ, ಇಬ್ಬರನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News