ಲಾರಿ ಹರಿದು ಬಾಲಕ ಮೃತ್ಯು

Update: 2018-12-17 13:24 GMT

ಬೆಂಗಳೂರು, ಡಿ.17: ಶರವೇಗದಲ್ಲಿ ಸಾಗುತ್ತಿದ್ದ ಲಾರಿಯೊಂದು ಹರಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲದ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, 14 ವರ್ಷದ ಜೋತು ಚೌಹಾನ್ ಮೃತ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ರಸ್ತೆಬದಿಯ ಮಲಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮಾಲಾ (45) ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇನ್ನುಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News