ಘಾಝಿಪುರ: ಯೋಧನ ಹತ್ಯೆ

Update: 2018-12-20 15:17 GMT

ಘಾಝಿಪುರ, ಡಿ. 20: ಇಲ್ಲಿನ ಗ್ರಾಮವೊಂದರಲ್ಲಿ ಶಸಸ್ತ್ರ ಸೀಮಾ ಬಲದ ಯೋಧ (35) ನೋರ್ವನನ್ನು ಬೈಕ್‌ನಲ್ಲಿ ಆಗಮಿಸಿದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಕಾಟ್ರಿಯಾ ಗ್ರಾಮದಲ್ಲಿ ಈ ಘಟನೆ ಸೋಮವಾರ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ನಗರ) ಪ್ರದೀಪ್ ಕುಮಾರ್ ತಿಳಿಸಿದ್ದಾರೆ. ‘‘ಸೋಮವಾರ ಅಪರಿಚಿತ ದುಷ್ಕರ್ಮಿಗಳು ಎಸ್‌ಎಸ್‌ಬಿ ಯೋಧ ರಾಮ್‌ನಿವಾಸ್ ನಿಷಾದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಂದು ಅವರ ರಜೆಯಲ್ಲಿದ್ದು, ತನ್ನ ಗ್ರಾಮವಾದ ಕಾಟ್ರಿಯಾದಲ್ಲಿ ಇದ್ದರು’’ ಎಂದು ಕುಮಾರ್ ತಿಳಿಸಿದ್ದಾರೆ.

ಗಾಯಗೊಂಡ ಯೋಧನನ್ನು ಕೂಡಲೇ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅವರು ತಿಳಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಹತ್ಯೆಗೈದ ಅಪರಿಚಿತ ದುಷ್ಕರ್ಮಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News