ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿತ
Update: 2019-01-01 13:05 GMT
ಬೆಂಗಳೂರು, ಜ.1: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಪ್ರವೀಣ್ ಎಂದು ಪೊಲೀಸರು ಗುರುತಿಸಿದ್ದಾರೆ. ಸೋಮವಾರ ತಡರಾತ್ರಿ ಮದ್ಯದ ಅಮಲಿನಲ್ಲಿ ದುಷ್ಕರ್ಮಿಗಳು ಮನೆಗೆ ಹೋಗುತ್ತಿದ್ದ ವೇಳೆ ಅದೇ ದಾರಿಯಲ್ಲಿದ್ದ ಪ್ರವೀಣ್ನನ್ನು ಕಂಡು ಹೊಸ ವರ್ಷದ ಶುಭಾಷಯ ಎಂದಿದ್ದಾರೆ. ಆದರೆ, ದುಷ್ಕರ್ಮಿಗಳನ್ನು ಪ್ರವೀಣ್ ಮಾತನಾಡಿಸಲು ನಿರಾಕರಿಸಿದ ಕಾರಣ, ಆತನನ್ನು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಾಳು ಪ್ರವೀಣ್ ಅನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವೇಶ್ವರನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.