ರುದ್ರಭೂಮಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಚಿವ ಝಮೀರ್ ಅಹ್ಮದ್ ಖಾನ್

Update: 2019-01-13 15:59 GMT

ಬೆಂಗಳೂರು, ಜ.13: ಚಾಮರಾಜಪೇಟೆಯ ರುದ್ರಭೂಮಿಗೆ ಸಚಿವ ಝಮೀರ್ ಅಹ್ಮದ್‌ ಖಾನ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಅವರು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಸಚಿವರೊಂದಿಗೆ ಬೇಲಿಮಠದ ಶಿವರುದ್ರ ಸ್ವಾಮೀಜಿ ಕೂಡ ಸಾಥ್ ನೀಡಿ ಸಲಹೆ ನೀಡಿದರು. ಸ್ಮಶಾನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಮಿಕರು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಬೇಕು. ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಬರುವವರಿಗಾಗಿ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸುವಂತೆ ಝಮೀರ್ ಅವರು ಸಲಹೆ ಮಾಡಿದರು. ಬಿಬಿಎಂಪಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News