ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.24 ರಂದು ಸಮನ್ವಯ ಸಮಿತಿ ಸಭೆ
Update: 2019-01-23 15:29 GMT
ಬೆಂಗಳೂರು, ಜ. 23: ಆಪರೇಷನ್ ಕಮಲ, ಶಾಸಕರ ಹೊಡೆದಾಟ, ಬಜೆಟ್ ಸಿದ್ಧತೆ, ಲೋಕಸಭಾ ಚುನಾವಣಾ ಪೂರ್ವ ಮೈತ್ರಿ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ನಾಳೆ(ಜ.24) ಮೈತ್ರಿ ಸರಕಾರದ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ(ಜ.24) ಸಂಜೆ 5ಗಂಟೆಗೆ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರದ ಪ್ರತಿನಿಧಿಗಳು ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.