ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಣ ಎಸೆದ ಕಾನ್ ಸ್ಟೇಬಲ್ !

Update: 2019-01-29 16:15 GMT

ನಾಗಪುರ, ಜ. 29: ಇಲ್ಲಿನ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯಕ್ರಮ ನೀಡಿದ ವಿದ್ಯಾರ್ಥಿನಿಯರ ಮೇಲೆ ನಾಣ್ಯ ಎಸೆದ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಲಾಗಿದೆ. ಪಾನಮತ್ತನಾಗಿದ್ದ ಹೆಡ್ ಕಾನ್ಸ್‌ಟೆಬಲ್ ಪ್ರಮೋದ್ ವಾಲ್ಕೆ ವಿದ್ಯಾರ್ಥಿನಿಯರ ಮೇಲೆ ಹಣ ಎಸೆದಿರುವುದು ಶಾಲೆಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ವಾಲ್ಕೆ ವಿರುದ್ಧ ಈ ಕ್ರಮ ಕೈಗೊಂಡಿದೆ. ಬಿವಾಪುರ್ ಪೊಲೀಸ್ ಠಾಣೆ ಅಡಿಯಲ್ಲಿ ಬರುವ ನಂದ್ ಪೊಲೀಸ್ ಚೌಕಿಯಲ್ಲಿ ವಾಲ್ಕೆಯನ್ನು ನಿಯೋಜಿಸಲಾಗಿತ್ತು. ಸಮವಸ್ತ್ರದಲ್ಲಿರುವ ವಾಲ್ಕೆ ‘ಆಯೆ ವತನ್ ತೇರೇ ಲಿಯೇ’ ಹಾಡಿಗೆ ಕುಣಿದ ವಿದ್ಯಾರ್ಥಿನಿಯರ ಮೇಲೆ ನಾಣ್ಯಗಳನ್ನು ಎಸೆಯುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News