ಚುನಾವಣಾ ಅಕ್ರಮ ಆರೋಪ ಪ್ರಕರಣ: ಶಾಸಕ ಮುನಿರತ್ನ ವಿರುದ್ಧದ ಕೇಸ್ ಖುಲಾಸೆ
Update: 2019-01-29 16:26 GMT
ಬೆಂಗಳೂರು, ಜ.29: ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧದ ಕೇಸ್ ಖುಲಾಸೆಯಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಪುರಾವೆಗಳು ಸಿಗದ ಕಾರಣ ಕೇಸ್ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
2013ರಲ್ಲಿ ಚುನಾವಣಾ ಅಕ್ರಮ ಎಸಗಿ ಚುನಾವಣಾ ಅಧಿಕಾರಿ ರವಿಕುಮಾರ್ಗೆ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಆನಂತರ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ನ್ಯಾಯಾಲಯ ಮುನಿರತ್ನರನ್ನು ಆರೋಪ ಮುಕ್ತಗೊಳಿಸಿದೆ.