ನೇಕಾರ ಪ್ರಕೋಷ್ಠ ರಾಜ್ಯಾಧ್ಯಕ್ಷರಾಗಿ ಡಾ.ಜಿ.ರಮೇಶ್ ನೇಮಕ
Update: 2019-01-31 14:20 GMT
ಬೆಂಗಳೂರು, ಜ. 31: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಜಿ.ರಮೇಶ್ ಅವರನ್ನು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿರುವ ನೇಕಾರರನ್ನು ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಘಟಿಸುವ ಸಂಪೂರ್ಣ ಜವಾಬ್ದಾರಿಯನ್ನು ಕೂಡಲೇ ವಹಿಸಿಕೊಳ್ಳುವಂತೆ ಸೂಚಿಸಿದ ಯಡಿಯೂರಪ್ಪ, ಈ ಸಂಬಂಧ ಅಗತ್ಯ ಸಹಕಾರವನ್ನು ಪಕ್ಷ ನೀಡಲಿದೆ ಎಂದು ಹೇಳಿದ್ದಾರೆ.
ರಮೇಶ್ ಪೊಲೀಸ್ ಸೇವೆಯಿಂದ ನಿವೃತ್ತರಾದ ನಂತರ ರಾಜ್ಯ ದೇವಾಂಗ ಸಂಘದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. 2017ರಲ್ಲಿ ಡಾ.ಜಿ.ರಮೇಶ್ ಅವರು ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಬಿಎಸ್ವೈರಾಜ್ಯ ಕಾರ್ಯಕಾರಿಣಿಗೆ ಸದಸ್ಯರನ್ನಾಗಿ ನೇಮಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.