ಮಂಗಳೂರು , ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸಾ ಘಟಕಗಳ ನಿರ್ಮಾಣ
ಬೆಂಗಳೂರು, ಫೆ.8: ಮಂಗಳೂರು , ತುಮಕೂರು , ಚಿತ್ರದುರ್ಗ, ಹಾವೇರಿ, ಕೋಲಾರ ಸೇರಿದಂತೆ 10 ಜಿಲ್ಲೆಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸಾ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.
►ಹೆಬ್ಬಾಳ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ಹೊರವರ್ತುಲ ರಸ್ತೆ ನಿರ್ಮಿಸಲು 16, 579 ಕೋಟಿ ರೂ.
►ಮೆಟ್ರೋ ಹಾಗೂ ಬಸ್ ಪ್ರಯಾಣಕ್ಕೆ ಏಕರೂಪದ ಪಾಸ್ ವ್ಯವಸ್ಥೆ
►10 ಮೆಟ್ರೋ ನಿಲ್ದಾಣಗಳಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಚಾರ್ಜಿಂಗ್ ವ್ಯವಸ್ಥೆ
►ಸವಿತಾ ಸಮಾಜದ ಅಭಿವೃದ್ಧಿಗೆ ನಿಗಮ .
►ಅಲೆಮಾರಿ ಜನಾಂಗದ ಅಭಿವೃದ್ಧಿಗೆ 25 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ
►ಹೊಸ ತಾಲೂಕುಗಳು: ಹಾರೋಹಳ್ಳಿ, ಚೇಳೂರು, ಕಳಸ, ತೆರದಾಳ
►ಮಹಾನಗರಪಾಲಿಕೆಗಳ ಅಭಿವೃದ್ಧಿಗೆ 1,325 ಕೋಟಿ ರೂ.
►ಚಿಕ್ಕಮಗಳೂರಿನಲ್ಲಿ ಬಾಲಕಿಯರಿಗೆ ಬಾಲ ಮಂದಿರ.
►ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 500 ರೂ. ಮಾಸಿಕ ಹೆಚ್ಚಳ.
►ನೋಂದಣಿ , ಮುದ್ರಾಂಕ ಇಲಾಖೆಗೆ 11,828 ಕೋಟಿ ರೂ.
►ಮಂಗಳೂರು , ತುಮಕೂರು , ಚಿತ್ರದುರ್ಗ, ಹಾವೇರಿ, ಕೋಲಾರ ಸೇರಿದಂತೆ 10 ಜಿಲ್ಲೆಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸಾ ಘಟಕಗಳ ನಿರ್ಮಾಣ
►ಸಿದ್ದಗಂಗಾ ಶ್ರೀಗಳ ಹುಟ್ಟೂರ ಅಭಿವೃದ್ಧಿಗೆ 25 ಕೋಟಿ ರೂ.
►ಸಾರಥಿ ಸೂರು ವಸತಿ ಯೋಜನೆಗೆ 50 ಕೋಟಿ ರೂ.
►20 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಸಂವಿಧಾನ ಮ್ಯೂಸಿಯಂ.
►ಅಂಕಪಟ್ಟಿಗಳ ಡಿಜಿಟಲೀಕರಣಕ್ಕೆ 1 ಕೋಟಿ ರೂ. ಅನುದಾನ.