ಸಂಸದ ಪ್ರತಾಪ್ ಸಿಂಹ ಪೊಲೀಸ್ ವಶಕ್ಕೆ
Update: 2019-03-08 08:53 GMT
ಬೆಂಗಳೂರು, ಮಾ. 8: ನಟ ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕೋರ್ಟ್ ಗೆ ಹಾಜರಾಗಿರುವ ಸಂಸದ ಪ್ರತಾಪ್ ಸಿಂಹ ರನ್ನು ನ್ಯಾಯಾಧೀಶರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ವಿ. ಪಾಟೀಲ ಅವರು ಸಂಸದ ಪ್ರತಾಪ್ ಸಿಂಹರನ್ನು ವಶದಲ್ಲಿ ಇರಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಕಳೆದ ಬಾರಿಯ ವಿಚಾರಣೆ ವೇಳೆ ಪ್ರತಾಪ್ ಸಿಂಹ ವಿಚಾರಣೆಗೆ ಗೈರಾಗಿದ್ದರು. ಅವರನ್ನು ಪ್ರತಿನಿಧಿಸುವ ವಕೀಲರೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಇದರನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು ಮತ್ತು ಜಾಮೀನು ರಹಿತ ವಾರಂಟ್ ಅಡಿಯಲ್ಲಿ ಕೋರ್ಟ್ ಗೆ ಹಾಜರುಪಡಿಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶಿಸಿತ್ತು.