ಜೂಜಾಟ ಕ್ಲಬ್ ಮೇಲೆ ಸಿಸಿಬಿ ದಾಳಿ: ವ್ಯವಸ್ಥಾಪಕ ಸೇರಿ 23 ಜನರ ಬಂಧನ

Update: 2019-03-28 16:31 GMT

ಬೆಂಗಳೂರು, ಮಾ.28: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ಕ್ಲಬ್‌ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಕ್ಲಬ್‌ನ ವ್ಯವಸ್ಥಾಪಕ ಸೇರಿ 23 ಮಂದಿಯನ್ನು ಬಂಧಿಸಿ, 41 ಸಾವಿರ ರೂ. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ಲಬ್‌ನ ವ್ಯವಸ್ಥಾಪಕ ಎಚ್.ಎಸ್.ಕುಮಾರ್ ಸೇರಿದಂತೆ 23 ಜನರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಇಲ್ಲಿನ ಅಝಾದ್ ನಗರದ 7ನೆ ಮುಖ್ಯರಸ್ತೆಯ ಕಟ್ಟಡವೊಂದರಲ್ಲಿ ಹದ್ದಿನಕಲ್ಲು ಆಂಜನೇಯ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್‌ನಲ್ಲಿ ಸದಸ್ಯರಲ್ಲದ ಕೆಲವು ಜನರು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News