ಪ್ರತ್ಯೇಕ ಪ್ರಕರಣ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ಕಳವು

Update: 2019-07-15 18:40 GMT

ಶಿವಮೊಗ್ಗ, ಜು.15: ಜಿಲ್ಲೆಯ ಶಿವಮೊಗ್ಗ ಹಾಗೂ ಸಾಗರದಲ್ಲಿ ನಡೆದ ಎರಡು ಪ್ರತ್ಯೇಕ ಮನೆಗಳ್ಳತನ ಪ್ರಕರಣಗಳಲ್ಲಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. 

ಶಿವಮೊಗ್ಗ ವರದಿ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಿ ಅಂಡ್ ಟಿ ಕಾಲೋನಿಯ ಭವಾನಿ ಎಂಬುವರ ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು ಬೀರುವಿನಲ್ಲಿದ್ದ 10 ಸಾವಿರ ನಗದು, 280 ಗ್ರಾಂ ತೂಕದ ಬೆಳ್ಳಿಯ ವಸ್ತುಗಳನ್ನು ಅಪಹರಿಸಿದ್ದಾರೆ. ಕಳುವಾದ ವಸ್ತುಗಳ ಮೌಲ್ಯ 24,800 ರೂ.ಗಳೆಂದು ಅಂದಾಜಿಸಲಾಗಿದೆ. 

ಸಾಗರ ವರದಿ: ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಧಿನಗರ ಬಡಾವಣೆಯ ಶಂಕರಮ್ಮ ಎಂಬುವರ ಮನೆಯ ಮುಂಬಾಗಿಲಿಗೆ ಹಾಕಿದ್ದ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು 15,800 ರೂ. ಮೌಲ್ಯದ ಚಿನ್ನಾಭರಣ ಹಾಗೂ 4000 ನಗದನ್ನು ಕಳವು ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News