ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿರೋಧಿಸಿ ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ
Update: 2019-07-22 08:03 GMT
ತುಮಕೂರು, ಜು.22: ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ, ಡಿಸಿಸಿ ಬ್ಯಾಂಕ್, ವಿ.ಎಸ್.ಎಸ್.ಎನ್, ಕೃಷಿ ಪತ್ತಿನ ಸಹಕಾರ ಸಂಘಗಳ ಸಿಬ್ಬಂದಿ ವರ್ಗದವರು ಅಯಾಯಾ ಬ್ಯಾಂಕುಗಳ ಮುಂದೆ ಸೋಮವಾರ ಪತ್ರಿಭಟನೆ ನಡೆಸಿದರು.
ಸರಕಾರ ಉದ್ದೇಶಪೂರ್ವಕವಾಗಿ ರಾಜಕೀಯ ದುರುದ್ದೇಶದಿಂದ ಯಾವುದೇ ಅವ್ಯವಹಾರ ನಡೆಯದಿದ್ದರು ಸೂಪರ್ ಸೀಡ್ ಮಾಡಿ ದ್ವೇಷದ ಕೆಲಸ ಮಾಡಿದೆ ಎಂದು ಪತ್ರಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗ್ಗೆ 10 ಗಂಟೆಯಿಂದ 10:30ರವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಬಳಿಕ ಎಂದಿನಂತೆ ಕಾರ್ಯ ನಿರ್ವಹಿಸಿದರು.