ಬಿಜೆಪಿ ಅಧಿಕಾರಕ್ಕೆ ಬಂದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

Update: 2019-07-22 13:44 GMT

ಬೆಂಗಳೂರು, ಜು.22: ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನೂತನ ಸರಕಾರ ರಚನೆಯಾಗಲಿ ಎಂಬುದು ಜನರ ಆಶಯ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನದ ಆಕ್ಷಾಂಕ್ಷಿಗಳಲ್ಲಿ ನಾನೂ ಒಬ್ಬ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ನಾನು ಪಕ್ಷದಿಂದ ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷದ ಹಿರಿಯ ಶಾಸಕರ ಪಟ್ಟಿಯಲ್ಲಿಯಲ್ಲಿ ನನ್ನ ಹೆಸರೂ ಇದೆ. ಹೀಗಾಗಿ, ಬಿಜೆಪಿ ಸರಕಾರ ರಚನೆಯಾದರೆ ನನಗೂ ಒಂದು ಅವಕಾಶ ನೀಡಬೇಕು ಎಂದು ತಿಳಿಸಿದರು.

ಚಿತ್ರದುರ್ಗ ಉಸ್ತುವಾರಿ ಸಚಿವರ ಹೊಣೆ ಜಿಲ್ಲೆಯ ಹೊರಗಿನವರಿಗೆ ಸಿಕ್ಕಿದ್ದೆ ಹೆಚ್ಚು. ಪಕ್ಷ ಅವಕಾಶ ಕಲ್ಪಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬರಪೀಡಿತ ಪ್ರದೇಶಕ್ಕೆ ಕಾಯಕಲ್ಪ ನೀಡಿ, ನೀರಾವರಿ ಯೋಜನೆಗೆ ಒತ್ತು ನೀಡುತ್ತೇನೆ. ಹಿರಿತನದ ಆಧಾರದ ಮೇರೆಗೆ ಸಚಿವ ಸ್ಥಾನದ ಅವಕಾಶ ಸಿಗುತ್ತದೆ ಎಂಬ ನಂಬಿಕೆ ಇದೆ. ಸಿಗುವ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News