ಅತೃಪ್ತ ಶಾಸಕರಿಗೂ ನನಗೂ ಸಂಬಂಧವಿಲ್ಲ: ಬಿಎಸ್‌ವೈ ಆಪ್ತ ಸಹಾಯಕ ಸಂತೋಷ್

Update: 2019-07-24 12:24 GMT

ಬೆಂಗಳೂರು, ಜು.24: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೂ ನನಗೂ ಯಾವುದೆ ಸಂಬಂಧವಿಲ್ಲವೆಂದು ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ತಿಳಿಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಶಾಸಕರೊಂದಿಗೂ ಕಾಣಿಸಿಕೊಂಡಿಲ್ಲ. ಆ ವ್ಯಕ್ತಿಯೇ ನಾನಲ್ಲ. ನಾನು ಎಲ್ಲಿಗೂ ಹೋಗಿರಲಿಲ್ಲ. ನಿಮ್ಮ ಎದುರಲ್ಲೇ ಓಡಾಡಿಕೊಂಡು ಇದ್ದೇನೆ. ಹೀಗಿದ್ದೂ ನನ್ನನ್ನು ಯಾಕೆ ಹಾಗೆ ಬಿಂಬಿಸಲಾಗುತ್ತಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯುವಷ್ಟು ನಾನು ದೊಡ್ಡವನಾಗಿಲ್ಲ. ಸುಮ್ಮನೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದದ್ದೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News