ನಾವು ಅತೃಪ್ತ ಶಾಸಕರಲ್ಲ ಅಸಹಾಯಕರು: ಶಿವರಾಮ್ ಹೆಬ್ಬಾರ್

Update: 2019-07-25 05:43 GMT

ಬೆಂಗಳೂರು, ಜು.25: ನಾವು ಅತೃಪ್ತ ಶಾಸಕರಲ್ಲ ಅಸಹಾಯಕರು. ನಮ್ಮ ಸಹಾಯಕ್ಕೆ ಯಾರೂ ಬರಲಿಲ್ಲ. ಈ ಕಾರಣದಿಂದಾಗಿ ನಾವು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದೆವು ಎಂದು ಯಲ್ಲಾಪುರದ ಅತೃಪ್ತ ಕಾಂಗ್ರೆಸ್ ಶಾಸಕ  ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

ಮುಂಬೈನಿಂದ  ತಮ್ಮ ಊರು  ಹಳಿಯಾಲಕ್ಕೆ ಇಂದು ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ  ಅನರ್ಹತೆಯ ಬಗ್ಗೆ ಭಯವಿಲ್ಲ, ನಮ್ಮ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆ ಇದೆ.ಸ್ಪೀಕರ್, ಸುಪ್ರೀಂ ಕೋರ್ಟ್ ನ ಮೇಲೆ ನಂಬಿಕೆ ಇದೆ.  ಮೂರ್ನಾಲ್ಕು   ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

  ಸಮ್ಮಿಶ್ರ ಸರಕಾರದ ವಿರುದ್ಧ ಅಸಮಾಧಾನವಿತ್ತು. ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನಮ್ಮ ನಾಯಕರು. ಆದರೆ ಈಗ ಅವರು ನಾಯಕರಲ್ಲವೆಂದು ಹೇಳುತ್ತಿದ್ದಾರೆ ಎಂದರು.

ನಮ್ಮ ನಿಲುವು ಅಚಲವಾಗಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ, ರಾಜೀನಾಮೆ ಹಿಂಪಡೆಯುವ ಪ್ರಶ್ನೆ ಇಲ್ಲ ಎಂದು ನುಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News