ಬಿಎಸ್‌ವೈ ಪ್ರಮಾಣ ವಚನ ಪ್ರಜಾಪ್ರಭುತ್ವಕ್ಕೆ ಕಳಂಕ: ದಿನೇಶ್ ಗುಂಡೂರಾವ್

Update: 2019-07-26 12:48 GMT

ಬೆಂಗಳೂರು, ಜು. 26: ‘ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪಕ್ಷದ ಎಲ್ಲ ನಾಯಕರು ಭಾಗವಹಿಸದಂತೆ ನಾನು ಸೂಚನೆ ನೀಡುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ತಿಳಿಸಿದ್ದಾರೆ.

‘ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ’ ಎಂದು ಅವರು ಟೀಕಿಸಿದ್ದಾರೆ.

ಇಂತಹ ಅಪವಿತ್ರ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳಲು ನಿರಾಕರಿಸುತ್ತೇನೆ. ಪಕ್ಷದ ಎಲ್ಲ ಮುಖಂಡರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸೂಚನೆ ನೀಡುವೆ ಎಂದು ದಿನೇಶ್ ಗುಂಡೂರಾವ್ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ಶುಕ್ರವಾರ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News