ಪ್ರವಾಹ ಸಂತ್ರಸ್ತರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಅಧಿಕಾರಿ

Update: 2019-08-14 18:39 GMT

ಬೆಳಗಾವಿ, ಆ.14: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಹಲವಾರು ಜನರು ಮಿಡಿದಿದ್ದಾರೆ. ತಮ್ಮ ಕೈಲಾದ ಸಹಾಯ ನೀಡುತ್ತಿದ್ದಾರೆ. ಹಾಗೆಯೇ ಬೆಳಗಾವಿಯ ಆಹಾರ ನಿರೀಕ್ಷಕ ಅಫ್ಝಲ್ ಬಾಗೋಜಿಕೊಪ್ಪತಮ್ಮ ಒಂದು ತಿಂಗಳ ವೇತನವನ್ನು ಪ್ರವಾಹ ಪರಿಹಾರ ನಿಧಿಗೆ ಅರ್ಪಿಸಿದ್ದಾರೆ.

ಇದರ ಚೆಕ್‌ನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ಪ್ರವಾಹ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ನೀಡಿದ ಅಫ್ಝಲ್ ಅವರ ಮಾನವೀಯತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಂತ್ರಸ್ತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News