ಪ್ರವಾಹ ಸಂತ್ರಸ್ತರ ನೆರವಿಗೆ 195 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರಕಾರ

Update: 2019-08-19 17:22 GMT

ಬೆಂಗಳೂರು, ಆ. 19: ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆಬರೆ ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರಕಾರ ಒಟ್ಟು 195 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಬಾಧಿತ ಸಂತ್ರಸ್ತರಿಗೆ ಬಟ್ಟೆ-ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ.ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರಕಾರವು 115 ಕೋಟಿ ರೂ.ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News