ಸಚಿವ ಸಂಪುಟ ವಿಸ್ತರಣೆಯಲ್ಲಿ ದಲಿತರಿಗೆ ಅನ್ಯಾಯ: ಮಾಜಿ ಸಂಸದ ಆರ್.ಧ್ರುವನಾರಾಯಣ್

Update: 2019-08-20 17:49 GMT

ಮೈಸೂರು,ಆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗಿದೆ. ಸಚಿವ ಸ್ಥಾನ ನೀಡುವ ವೇಳೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದ ಸಂಸದ ವಿ.ಶ್ರೀನಿವಾಸಪ್ರಸಾದ್ ಈಗ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಸಚಿವ ಸಂಪುಟ ವಿಸ್ತರಣೆ ವೇಳೆ ಎಲ್ಲಾ ವರ್ಗಗಳನ್ನು ಗಮನದಲ್ಟಿಟ್ಟುಕೊಂಡು ಸಚಿವ ಸ್ಥಾನ ನೀಡಬೇಕು, ಆದರೆ ಯಡಿಯೂರಪ್ಪ ಮಾಡಿರುವುದಾದರೂ ಏನು? ದಲಿತರಿಗೆ ಸಚಿವ ಸ್ಥಾನ ನೀಡುವ ವೇಳೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News