ನೂತನ ಸಚಿವರಿಗೆ ಖಾತೆ ಹಂಚಿಕೆ ನಾಳೆ ಪೂರ್ಣ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-24 16:49 GMT

ಬೆಂಗಳೂರು, ಆ.24: ನೂತನ ಸಚಿವರಿಗೆ ಖಾತೆ ಹಂಚಿಕೆ ನಾಳೆ ಪೂರ್ಣವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ನೂತನ ಸಚಿವರಿಗೆ ಖಾತೆ ಹಂಚಿಕೆ ನಾಳೆ ಪೂರ್ಣವಾಗಲಿದೆ. ರಾಜ್ಯಪಾಲರಿಗೆ ನಾಳೆ ಪಟ್ಟಿ ಕಳುಹಿಸಲಾಗುವುದು. ಇಂದೇ ಸಚಿವ ಪಟ್ಟಿ ಸಿದ್ದವಾಗಿತ್ತು. ಆದರೆ, ಅರುಣ್ ಜೇಟ್ಲಿ ನಿಧನದಿಂದ ನಾಳೆ ಪಟ್ಟಿ ರವಾನಿಸಲು ನಿರ್ಧರಿಸಲಾಗಿದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಮದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News