ಸುಬ್ಬಯ್ಯ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಸಂತಾಪ
Update: 2019-08-27 15:54 GMT
ಬೆಂಗಳೂರು, ಆ.27: ನೇರ, ನಿಷ್ಠುರ ಮಾತುಗಳಿಗೆ ಹೆಸರುವಾಸಿಯಾಗಿದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಎ.ಕೆ.ಸುಬ್ಬಯ್ಯ ನಿಧನವು ನನಗೆ ನೋವಿನ ಸಂಗತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಸುಬ್ಬಯ್ಯ ಅವರು ವಕೀಲರಾಗಿಯೂ ಸಾಕಷ್ಟು ಖ್ಯಾತಿಗಳಿಸಿದ್ದರು. ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಸಕ್ರಿಯರಾಗಿಲ್ಲದಿದ್ದರೂ ಅವರ ಒಡನಾಡಿಗಳು ಇಂದಿಗೂ ಅವರ ರಾಜಕೀಯ ನಡೆಯನ್ನು ನೆನಪಿಸಿಕೊಳ್ಳುತ್ತಾರೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.