ನನ್ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಿಜೆಪಿ ಗೆಳೆಯರಿಗೆ ಅಭಿನಂದನೆಗಳು: ಡಿ.ಕೆ.ಶಿವಕುಮಾರ್

Update: 2019-09-03 16:12 GMT

ಬೆಂಗಳೂರು, ಸೆ.3: 'ನನ್ನನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾದ ನನ್ನ ಬಿಜೆಪಿಯ ಗೆಳೆಯರನ್ನು ನಾನು ಅಭಿನಂದಿಸುತ್ತೇನೆ' ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಬಳಿಕ ಟ್ವೀಟ್ ಮಾಡಿರುವ ಶಿವಕುಮಾರ್, ನನ್ನ ವಿರುದ್ಧದ ಆದಾಯ ತೆರಿಗೆ ಇಲಾಖೆ ಮತ್ತು ಈಡಿ ಪ್ರಕರಣಗಳು ರಾಜಕೀಯ ಪ್ರೇರಿತ ಮತ್ತು ನಾನು ಬಿಜೆಪಿಯ ಪ್ರತೀಕಾರ ಮತ್ತು ಸೇಡಿನ ರಾಜಕಾರಣದ ಸಂತ್ರಸ್ತ ಎಂದು ಹೇಳಿದ್ದಾರೆ.

“ನಾನು ಯಾವುದೇ ಅಕ್ರಮ ನಡೆಸಿಲ್ಲ. ಆದ್ದರಿಂದ ನನ್ನ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಸಹೋದ್ಯೋಗಿಗಳು ಬೇಸರಿಸಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ. ನನಗೆ ದೇವರು ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆಯಿದೆ. ಈ ಸೇಡಿನ ರಾಜಕೀಯದ ವಿರುದ್ಧ ನಾನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಜಯ ಗಳಿಸಲಿದ್ದೇನೆ ಎನ್ನುವ ಆತ್ಮವಿಶ್ವಾಸವಿದೆ” ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News