ಚಾಮುಂಡಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿರುವ ಅಂಗಡಿ ಮುಚ್ಚುಗಡೆಗೆ ವಿರೋಧ: ವ್ಯಾಪಾರಿಗಳಿಂದ ಸಿದ್ದರಾಮಯ್ಯರಿಗೆ ಮನವಿ
Update: 2019-09-07 05:24 GMT
ಬೆಂಗಳೂರು, ಸೆ.7: ಚಾಮುಂಡಿ ಬೆಟ್ಟದಲ್ಲಿ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವ್ಯಾಪಾರಸ್ಥರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ವ್ಯಾಪಾರಸ್ಥರು, ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಂಗಡಿಗಳನ್ನು ಮುಚ್ವಿದರೆ ನಾವು ಬೀದಿ ಪಾಲಾಗುತ್ತೇವೆ. ಈ ಕುರಿತು ಸರ್ಕಾರದ ಗಮನ ಸೆಳೆಯಿರಿ ಎಂದು ಒತ್ತಾಯಿಸಿದರು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.