ನೂತನ ಮೋಟಾರು ಕಾಯ್ದೆ ಜನರಿಗೆ ಕಿರುಕುಳ ಕೊಡುವ ಅಸ್ತ್ರ: ಸಿದ್ದರಾಮಯ್ಯ

Update: 2019-09-08 13:37 GMT

ಬೆಂಗಳೂರು, ಸೆ.8: ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸುವ ಕಟ್ಟುನಿಟ್ಟಿನ ಸಾರಿಗೆ ಸಂಚಾರ ನಿಯಮಗಳನ್ನು ಹೊಂದಿರುವ ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರವಿವಾರ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಈ ಕಾಯ್ದೆಯನ್ನು ಜನರಿಗೆ ಕಿರುಕುಳ ಕೊಡುವ ಅಸ್ತ್ರವನ್ನಾಗಿ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಸ್ತೆ ಸಂಚಾರ ನಿಯಮಾವಳಿಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಆದರೆ, ನಿಯಮ ಉಲ್ಲಂಘನೆಗೆ ಭಾರೀ ಮೊತ್ತದ ದಂಡ ವಿಧಿಸುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News