ಆರ್‌ಬಿಐಯಿದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

Update: 2019-10-04 17:23 GMT

ಮುಂಬೈ, ಅ. 4: ದೇಶಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ಹೇರಿದ ನಿಷೇಧವನ್ನು ಕೇಂದ್ರ ಸರಕಾರ ಕೈ ಬಿಟ್ಟ ಹೊರತಾಗಿಯೂ ಏಕ ಬಳಕೆ ಪ್ಲಾಸ್ಟಿಕ್ ಬಳಸದಿರಲು ಆರ್‌ಬಿಐ ನಿರ್ಧರಿಸಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಹೇಳಿದ್ದಾರೆ.

ಅಕ್ಟೋಬರ್ 2ರಿಂದ ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿತ್ತು. ಆದರೆ, ಅನಂತರ ಇದರಿಂದ ಕೈಗಾರಿಕೆಗಳಿಗೆ ತುಂಬಾ ತೊಂದರೆ ಆಗುವುದರಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ‘‘ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸುವಂತೆ ಆಂತರಿಕವಾಗಿ ಸುತ್ತೋಲೆ ಜಾರಿ ಮಾಡಿದ್ದೇವೆ’’ ಎಂದು ಶಕ್ತಿಕಾಂತ್ ತಿಳಿಸಿದ್ದಾರೆ. ಸ್ವಾತಂತ್ರ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪರಿಸರ ಸಂರಕ್ಷಿಸಲು ಏಕ ಬಳಕೆಯ ಪ್ಲಾಸ್ಟಿಕ್‌ನ್ನು ನಿಷೇಧಿಸುವಂತೆ ಕರೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News