ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಮೃತ್ಯು

Update: 2019-10-06 18:12 GMT

ಶಿವಮೊಗ್ಗ, ಅ. 6: ಕೆರೆಯಲ್ಲಿ ಈಜಾಡಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಶಿಕಾರಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಲವಂತನಕೊಪ್ಪ ಗ್ರಾಮದಲ್ಲಿ ನಡೆದಿದೆ. 

ಅದೇ ಗ್ರಾಮದ ನಿವಾಸಿಗಳಾದ ಮದನ್ ಯಾನೆ ಶಂಭು (14) ಹಾಗೂ ಉದಯಕುಮಾರ್ (15) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ. ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‍ನ ಪ್ರೌಢಶಾಲೆಯಲ್ಲಿ 8 ನೇ ತರಗತಿ ಅಭ್ಯಾಸ ನಡೆಸುತ್ತಿದ್ದರು. 

ಶಾಲೆಯಲ್ಲಿ ನಡೆದ ಅರ್ಧ ವಾರ್ಷಿಕ ಪರೀಕ್ಷೆ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ, ಆರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News