ಬಿಬಿಎಂಪಿ ಟಿಡಿಆರ್ ಹಗರಣ: ಕೃಷ್ಣಲಾಲ್ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2019-10-11 17:35 GMT

ಬೆಂಗಳೂರು, ಅ.11: ಬಿಬಿಎಂಪಿ ಟಿಡಿಆರ್ ಹಗರಣದ ಪ್ರಮುಖ ಆರೋಪಿ ಬಿಡಿಎ ಎಇಇ ಕೃಷ್ಣಲಾಲ್ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಆರೋಪಿ ಕೃಷ್ಣಲಾಲ್, ಎಸಿಬಿ ಪೊಲೀಸರು ದಾಖಲಿಸಿದ್ದ ಕೇಸ್‌ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದ. ಅಲ್ಲದೆ, ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನಲೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ವೇಳೆ ಸ್ವಾಧೀನ ಪಡಿಸಿಕೊಂಡ ಜಾಗಕ್ಕೆ ನಿಗದಿಗಿಂತ ಹೆಚ್ಚು ಹಣ ಪಡೆದ ಆರೋಪದಡಿ ಎಸಿಬಿ ದಾಳಿ ಮಾಡಿತ್ತು. ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ.ನಷ್ಟವಾಗುತ್ತದೆ ಎನ್ನುವ ದೂರು ದಾಖಲಾಗಿದ್ದ ಹಿನ್ನಲೆ ಎಪ್ರಿಲ್ 27 ರಂದು ಕೃಷ್ಣಲಾಲ್ ಮತ್ತು ಸಹಚರರ ಮೇಲೆ ಎಸಿಬಿ ದಾಳಿ ನಡೆಸಿತ್ತು. ಆದರೆ ಆರೋಪಿ ಕೃಷ್ಣಲಾಲ್ ಎಸಿಬಿ ದಾಖಲಿಸಿದ್ದ ಕೇಸ್‌ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದ. ಅಲ್ಲದೆ, ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ. ನ್ಯಾಯಪೀಠವು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News