ತೊಕ್ಕೊಟು: ರೈಲು ಢಿಕ್ಕಿ; ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತ್ಯು

Update: 2019-10-22 15:50 GMT
ಸಾಂದರ್ಭಿಕ ಚಿತ್ರ

ಉಳ್ಳಾಲ: ತೊಕ್ಕೊಟು ರೈಲ್ವೆ ಹಳಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ  ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟು ಒಳಪೇಟೆಯಲ್ಲಿ ಮಂಗಳವಾರ ನಡೆದಿದೆ.

ಅವರು ರೈಲ್ವೆ ಹಳಿ ದಾಟುವ ಸಂದರ್ಭ ಸ್ಥಳೀಯರು ರೈಲು ಬರುತ್ತಿರುವ ಬಗ್ಗೆ ಸೂಚನೆ ನೀಡಿದ್ದಾರೆ. ಆದರೂ ಕೂಡಾ ಆ ವ್ಯಕ್ತಿ ತಿರುಗಿ ನೋಡದೆ ನೇರ ದಾಟಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಳೆದ ಶುಕ್ರವಾರ ಇದೇ ಜಾಗದಲ್ಲಿ ಮಳೆಯ ಅಬ್ಬರಕ್ಕೆ ಕೂಲಿ ಕೆಲಸ ಮಾಡಿ ವಾಪಾಸ್ ಆಗುತ್ತಿದ್ದ ಸುಭಾಷ್ ಮತ್ತು ಮಂಜುನಾಥ್ ಎಂಬಿಬ್ಬರಿಗೆ ರೈಲು ಢಿಕ್ಕಿ ಹೊಡೆದು ಸುಭಾಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಮಂಜುನಾಥ್ ಗಂಭೀರ ಗಾಯಗೊಂಡಿದ್ದರು. ಇದರ ಬಳಿಕ ಮಂಗಳವಾರ ಮತ್ತೆ ಅದೇ ಜಾಗದಲ್ಲಿ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News