ಮಂಗಳೂರು: ಶಕ್ತಿ ಕಾಲೇಜು ವಿದ್ಯಾರ್ಥಿಗಳಿಗೆ ಸುಸಜ್ಜಿತ ಆಟದ ಮೈದಾನ

Update: 2019-10-24 16:58 GMT

ಮಂಗಳೂರು, ಅ.24: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಎರಡು ಎಕರೆ ಜಾಗದಲ್ಲಿ ಆಟದ ಮೈದಾನವನ್ನು ಗುರುವಾರ ಲೋಕಾರ್ಪಣೆಗೊಳಿಸಲಾಯಿತು.

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್ ಮೈದಾನದಲ್ಲಿ ಪೂಜೆ ನೆರೆವೇರಿಸಲಾಯಿತು. ಬಳಿಕ ಮಾತನಾಡಿದ ಅವರು, ಸುಮಾರು ಒಂದು ಕೋಟಿಗೂ ಮಿಕ್ಕಿದ ವೆಚ್ಚದಲ್ಲಿ ಮೈದಾನವನ್ನು ಸಿದ್ಧಗೊಳಿಸಲಾಗಿದೆ. ಈ ಮೈದಾನದಲ್ಲಿ ಆಟ ಆಡಿದ ಎಲ್ಲರೂ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಮೈದಾನ ರಾಷ್ಟ್ರಕ್ಕೆ ಸಮರ್ಪಿತವಾಗುತ್ತದೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೆ.ಸಿ ನಾಯಕ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್., ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಕ್ರೀಡಾಧಿಕಾರಿಗಳಾದ ಸುರೇಖಾ ಮತ್ತು ಶ್ರೀನಿವಾಸ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News