ಗೂಂಡಾ ಕಾಯ್ದೆಯಡಿ ಇಬ್ಬರ ಬಂಧನ

Update: 2019-10-25 12:50 GMT

ಬೆಂಗಳೂರು, ಅ.25: ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಗಳಾದ ಸತ್ಯಗೌಡ ಹಾಗೂ ಮಂಜುನಾಥ್ ಸ್ವಾಮಿ ಎಂಬುವರನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಮಾಳಗಾಳ ನಿವಾಸಿಯಾಗಿರುವ ಸತ್ಯಗೌಡ, ನಾಲ್ಕು ವರ್ಷಗಳಿಂದ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು, ಹಲವು ಬಾರಿ ಬಂಧಿತನಾದರೂ ಜಾಮೀನು ಮೇಲೆ ಹೊರಬಂದು, ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ಆರೋಪಿ ವಿರುದ್ಧ ಕೊಲೆ ಯತ್ನ, ಹಲ್ಲೆ, ದರೋಡೆ ಸೇರಿ 7 ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಮತ್ತೋರ್ವ ಆರೋಪಿ ಮಂಜುನಾಥ್ ಸ್ವಾಮಿ, ಯಲಹಂಕದ ಅಗ್ರಹಾರ ಲೇಔಟ್ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ 7 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆರೋಪಿಯ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News