ಕುರುಬರ ಸಂಘದ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ
Update: 2019-10-29 17:03 GMT
ಬೆಂಗಳೂರು, ಅ.29: ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆ ಪ್ರಕ್ರಿಯೆಗೆ ನಗರದ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಕನಕ ರಾಯಣ್ಣ ಸ್ಫೂರ್ತಿ ತಂಡದ ಬಿ.ರಾಜು, ಜೆ.ಜಗದೀಶ್ ಹಾಗೂ ನಾಗರಾಜು ಎಂಬುವರು ಜಂಟಿಯಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಪ್ರತಿವಾದಿ ಸಂಘದ ಅಧ್ಯಕ್ಷ, ಉಪ ನೋಂದಣಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.