ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ

Update: 2019-11-03 16:35 GMT

ಬೈಂದೂರು, ನ.3: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಬೈಂದೂರು ಪೊಲೀಸರು ಶಿರೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ನ.3ರಂದು ನಸುಕಿನ ವೇಳೆ ವಶಪಡಿಸಿಕೊಂಡಿದ್ದಾರೆ.

ಲಾರಿ ಚಾಲಕ ಗೌತಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಡ್ಯಾರಕಟ್ಟೆಯಲ್ಲಿ ಲಾರಿಗೆ ತುಂಬಿಸಿರುವ ಮರಳನ್ನು ಭಟ್ಕಳಕ್ಕೆ ಸಾಗಿಸುತ್ತಿದ್ದ ಎನ್ನಲಾಗಿದೆ. ಪೊಲೀಸರು ಲಾರಿ ಹಾಗೂ ಅದರಲ್ಲಿದ್ದ 40,000 ರೂ. ಮೌಲ್ಯದ 9 ಯುನಿಟ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News