ರಾಜ್ಯ ಬಿಜೆಪಿ ಸರಕಾರದ ವಜಾಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ

Update: 2019-11-04 16:14 GMT

ಉಡುಪಿ, ನ.4: ಬಿಜೆಪಿ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಡಿದ್ದರೆನ್ನಲಾದ ಮಾತುಗಳಿರುವ ವಿಡಿಯೋ ಬಿಜೆಪಿಯ ಆಪರೇಷನ್ ಕಮಲಕ್ಕೆ ಸಾಕ್ಷಿ. ಈಗಾಗಲೇ ಧ್ವನಿಮುದ್ರಿಕೆಯಲ್ಲಿರುವ ಧ್ವನಿ ತಮ್ಮದೆ ಎಂದು ಯಡಿಯೂರಪ್ಪ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜಿನಾಮೆ ನೀಡಲು ಹಾಗೂ ಮುಂಬೈಗೆ ಅವರನ್ನು ಕರೆದುಕೊಂಡು ಹೋಗಿ ಹೊಟೇಲ್‌ನಲ್ಲಿ ರಕ್ಷಣೆ ನೀಡಲು ಬಿಜೆಪಿಯೇ ಕಾರಣ ಎಂಬುದು ಸಾಬೀತಾಗಿದೆ. ಬಿಜೆಪಿಯಿಂದ ನಡೆದ ಈ ಪ್ರಜಾಪ್ರಭುತ್ವದ ಕಗ್ಗೊಲೆಗೆ ಕಾರಣರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಅಮಿತ್ ಶಾ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕರ್ನಾಟಕ ಸರಕಾರವನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ನೇತೃತ್ವದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಯೋಗವೊಂದು ಮಣಿಪಾಲಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಅವರಿಗೆ ಮನವಿಯನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಆರ್. ಸಭಾಪತಿ, ಮಾಜಿ ಜಿಲ್ಲಾಧ್ಯಕ್ಷ ಎಂ.ಎ.ಗಫೂರ್, ಮಾಜಿ ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಆರ್‌ಜಿಪಿಆರ್‌ಎಸ್ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ಪಕ್ಷದ ಮುಖಂಡರಾದ ನೀರೆ ಕೃಷ್ಣ ಶೆಟ್ಟಿ, ಯತೀಶ್ ಕರ್ಕೇರಾ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಕಿಶೋರ್ ಎರ್ಮಾಳ್, ವಿಲಿಯಂ ಫೆರ್ನಾಂಡಿಸ್, ಹಿರಿಯ ಮುಖಂಡರಾದ ಆನಂದ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಸುಧಾಕರ್ ಕೋಟ್ಯಾನ್, ಉಪೇಂದ್ರ ಮೆಂಡನ್, ಸುಭಾಶ್ ಕೊಳ, ಸಂಪತ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News