ತೆಲಂಗಾಣ ವೈದ್ಯೆಯ ಅತ್ಯಾಚಾರ, ಹತ್ಯೆ: ನಿರ್ಲಕ್ಷ್ಯ ಆರೋಪದಲ್ಲಿ ಮೂವರು ಪೊಲೀಸರ ಅಮಾನತು

Update: 2019-12-01 06:54 GMT

ಹೈದರಾಬಾದ್, ಡಿ.1: ತೆಲಂಗಾಣದಲ್ಲಿ ನಡೆದ ಪಶು ವೈದ್ಯೆಯೊಬ್ಬರ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಮೀನವೇಷ ಎಣಿಸಿದ್ದ ಆರೋಪದಲ್ಲಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಟ್ರಕ್ ಚಾಲಕರು ಹಾಗೂ ಕ್ಲೀನರ್‌ಗಳಾಗಿದ್ದಾರೆ. ಫಾಸ್ಟ್‌ಟ್ರಾಕ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗುವ ಸಾಧ್ಯತೆಯಿದೆ.

 ಸಬ್-ಇನ್‌ಸ್ಪೆಕ್ಟರ್ ಎಂ.ರವಿಕುಮಾರ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಾದ ಪಿ.ವೇಣು ಗೋಪಾಲ್ ರೆಡ್ಡಿ ಹಾಗೂ ಎ.ಸತ್ಯನಾರಾಯಣ ಗೌಡ್‌ರನ್ನು ಅಮಾನತುಗೊಳಿಸಲಾಗಿದ್ದು, ವಿವರವಾದ ತನಿಖೆಯ ತನಕ ಅಮಾನತಿನಲ್ಲಿ ಇಡಲಾಗಿದೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News