‘ಸಮುದಾಯೋತ್ಸವ್’ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2019-12-16 16:03 GMT

ಉಡುಪಿ, ಡಿ.16: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜ.19ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ನಡೆಯಲಿರುವ ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ಸಮು ದಾಯೋತ್ಸವ್-2020 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗುರುವಾರ ಸಂಘಟನೆಯ ಸಭಾಭವನದಲ್ಲಿ ಜರಗಿತು.

ಆಮಂತ್ರಣ ಪತ್ರಿಕೆಯನ್ನು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ.ಡಾ.ಲೆಸ್ಲಿ ಡಿಸೋಜ ಬಿಡುಗಡೆಗೊ ಳಿಸಿದರು. ಇದೇ ವೇಳೆ ಕೆಥೊಲಿಕ್ ಸಭಾದ ಅಂಗ ಸಂಸ್ಥೆ ಸಶಕ್ತ ಸಮುದಾಯ ಸೇವಾ ಟ್ರಸ್ಟ್ ವತಿಯಿಂದ ಧರ್ಮಪ್ರಾಂತ್ಯದ ಅರ್ಹ 11 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಸಹಾಯಧನ ವನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಭಾರತೀಯ ಕೆಥೊಲಿಕ್ ಯುವ ಸಂಚಾಲನದ ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷ ಡಿಯೋನ್ ಡಿಸೋಜ, ಕೆಥೊಲಿಕ್ ಸ್ತ್ರೀ ಸಂಘಟನೆ ಅಧ್ಯಕ್ಷೆ ಪ್ರಮೀಳಾ ಡೆಸಾ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ, ನಿಕಟ ಪೂರ್ವ ಅಧಕ್ಷ ವಲೇರಿಯನ್ ಫೆರ್ನಾಂಡಿಸ್, ಟ್ರಸ್ಟ್ ಅಧ್ಯಕ್ಷ ವಾಲ್ಟರ್ ಸಿರಿಲ್ ಪಿಂಟೊ, ಮಾಜಿ ಅಧ್ಯಕ್ಷ ಆಲ್ಫೋನ್ಸ್ ಡಿಕೋಸ್ತಾ, ಡಾ.ಜೆರಾಲ್ಡ್ ಪಿಂಟೊ ಉಪಸ್ಥಿತರಿದ್ದರು. ಆಲ್ವಿನ್ ಕ್ವಾಡ್ರಸ್ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News