ಮಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ: ಅಲ್ಲಲ್ಲಿ ಪ್ರತಿಭಟನಕಾರರ ಜಮಾವಣೆ; ಟಯರ್ ಗೆ ಬೆಂಕಿ

Update: 2019-12-19 14:55 GMT

ಮಂಗಳೂರು: ಪೌರತ್ವ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇಂದು ಮಧ್ಯಾಹ್ನ ಆರಂಭಗೊಂಡ ಪ್ರತಿಭಟನೆ ಇನ್ನೂ ನಿಯಂತ್ರಣಕ್ಕೆ ಬಾರದೆ ಅಲ್ಲಲ್ಲಿ ಪ್ರತಿಭಟನಕಾರರು ಜಮಾಯಿಸಿದ್ದಾರೆ. ಪ್ರತಿಭಟನಕಾರರು ಕಲ್ಲುತೂರಾಟ ನಡೆಸಿದ್ದು, ಸ್ಟೇಟ್ ಬ್ಯಾಂಕ್ ಸುತ್ತಮುತ್ತಲ ಪರಿಸರದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿದೆ. ನೆಲ್ಲಿಕಾಯಿ ರಸ್ತೆಯಲ್ಲಿ ಪ್ರತಿಭಟನಕಾರರು ಟಯರ್ ಗೆ ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನಕಾರರನ್ನು ಬಂಧಿಸಲು ಪೊಲೀಸರು ಈಗಾಗಲೇ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಟೌನ್ ಹಾಲ್ ಬಳಿ ಪ್ರತಿಭಟನಕಾರರು ಜಮಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪಂಪ್ ವೆಲ್ ನಿಂದ ಸ್ಟೇಟ್ ಬ್ಯಾಂಕ್ ಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News